ಬೆಂಗಳೂರು: ಅಸುರಕ್ಷಿತ ಲೈಂಗಿಕತೆ ಮತ್ತಿತರ ಕಾರಣಗಳಿಂದ ಜನಿಸಿದ ಶಿಶುಗಳನ್ನು ಕಸದ ಬುಟ್ಟಿಗಳು ಅಥವಾ ಚರಂಡಿಗಳಲ್ಲಿ ಬಿಸಾಡುವುದನ್ನು ತಡೆಯಲು, ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ‘ಮಮತೆಯ ತೊಟ್ಟಿಲು’ ಯೋಜನೆಯನ್ನು ಪ್ರೋತ್ಸಾಹಿಸುತ್ತಿದೆ. ನಗರದ 42 ಸ್ಥಳಗಳಲ್ಲಿ ಇರಿಸಲಾಗಿರುವ ತೊಟ್ಟಿಲುಗಳಲ್ಲಿ ಪೋಷಕರು ಅಧಿಕಾರಿಗಳು ಅಥವಾ ಪೊಲೀಸರ ಯಾವುದೇ ಭಯವಿಲ್ಲದೆ ಸುರಕ್ಷಿತ ತೊಟ್ಟಿಲುಗಳನ್ನು ತಮ್ಮ ಶಿಶುವನ್ನು ಹಾಕಿ ಹೋಗಬಹುದಾಗಿದೆ.
ಶಿಶುಗಳನ್ನು ಎಲ್ಲೆಂದರಲ್ಲಿ ಹಾಕದೆ ಮಗುವಿಗೆ ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಇಡುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಬೆಂಗಳೂರು ಪೂರ್ವದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮೀನಾಕ್ಷಿ ಎಸ್ ಕಬೇಡಿ ಹೇಳಿದರು.

ಇದು ಪರಿತ್ಯಕ್ತ ಪ್ರತಿಯೊಂದು ಮಗುವೂ ಕಾನೂನುಬದ್ಧವಾಗಿ ದತ್ತು ವ್ಯವಸ್ಥೆಯಡಿ ಬರುವುದನ್ನು ಖಾತರಿಪಡಿಸುತ್ತದೆ. ಹೆಚ್ಚಿನ ಪೋಕ್ಸೊ ಪ್ರಕರಣಗಳಲ್ಲಿ, ಲೈಂಗಿಕ ದೌರ್ಜನ್ಯ ಅಥವಾ ಅಸುರಕ್ಷಿತ ಲೈಂಗಿಕತೆಯ ನಂತರ ಹುಡುಗಿಯರು ತಾವು ಗರ್ಭಿಣಿಯಾಗಿದ್ದೇವೆ ಎಂದು ತಡವಾಗಿ ಅರಿತುಕೊಳ್ಳುತ್ತಾರೆ. ಅವರು ಪೊಲೀಸ್ ಕ್ರಮ ಮತ್ತು ಶಿಕ್ಷೆಗೆ ಹೆದರಿ ಮಗುವನ್ನು ತ್ಯಜಿಸುತ್ತಾರೆ ಎಂದು ಅವರು ಹೇಳಿದರು.






